ಪಿಒಪಿಯಿಂದ ತಯಾರಿಸಲಾದ 17 ಗಣೇಶ ಮೂರ್ತಿ ವಶಕ್ಕೆ
ಕಲಘಟಗಿ:ಪಟ್ಟಣದ ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಮೂರ್ತಿ ಮಾರಾಟ ಮಾಡುತ್ತಿದ್ದವರ ಮೇಲೆ ಕಿರಿಯ ಆರೋಗ್ಯ ನಿರೀಕ್ಷಕಿ ಪ್ರಿಯಾಂಕಾ ಕುರ್ಡಿಕೇರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 17 ಪಿಒಪಿ ಗಣೇಶ ಮೂರ್ತಿ ವಶಕ್ಕೆ ಪಡೆಯಲಾಗಿದೆ.
ಕಲಘಟಗಿ:ಪಟ್ಟಣದ ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಮೂರ್ತಿ ಮಾರಾಟ ಮಾಡುತ್ತಿದ್ದವರ ಮೇಲೆ ಕಿರಿಯ ಆರೋಗ್ಯ ನಿರೀಕ್ಷಕಿ ಪ್ರಿಯಾಂಕಾ ಕುರ್ಡಿಕೇರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 17 ಪಿಒಪಿ ಗಣೇಶ ಮೂರ್ತಿ ವಶಕ್ಕೆ ಪಡೆಯಲಾಗಿದೆ.
ಗಣೇಶ ಮೂರ್ತಿ ತಯಾರಕರು,ಮಾರಾಟಗಾರರು ಹಾಗೂ ಗಣೇಶ ಮೂರ್ತಿಗಳ ಪ್ರತಿಷ್ಠಾಪಿಸುವ ಸಾರ್ವಜನಿಕರಿಗೆ ಪಿಒಪಿ ಗಣೇಶ ಮೂರ್ತಿಗಳ ಬಳಕೆಯಿಂದ ಉಂಟಾಗುವ ಪರಿಸರ ಹಾನಿಯ ಕುರಿತು ಅರಿವು ಮೂಡಿಸಿದರು.
ಮುಂದಿನ ದಿನಗಳಲ್ಲಿ ಪಿಒಪಿ ಗಣೇಶ ಮೂರ್ತಿಗಳ ತಯಾರಿಕೆ ಹಾಗೂ ಮಾರಾಟ ಮಾಡದಂತೆ ಎಚ್ಚರಿಕೆ ನೀಡಿ ಪರಿಸರ ಸಂರಕ್ಷಣೆ ಹಾಗೂ ಜಲ ಮೂಲಗಳ ಸ್ವಚ್ಛತೆ ಕಾಪಾಡುವ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಬಳಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಯಿತು.
ಪಟ್ಟಣ ಪಂಚಾಯಿತಿಯ ಆರೋಗ್ಯ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಗಣೇಶ ಮೂರ್ತಿ ತಯಾರಕರು,ಮಾರಾಟಗಾರರು ಹಾಗೂ ಗಣೇಶ ಮೂರ್ತಿಗಳ ಪ್ರತಿಷ್ಠಾಪಿಸುವ ಸಾರ್ವಜನಿಕರಿಗೆ ಪಿಒಪಿ ಗಣೇಶ ಮೂರ್ತಿಗಳ ಬಳಕೆಯಿಂದ ಉಂಟಾಗುವ ಪರಿಸರ ಹಾನಿಯ ಕುರಿತು ಅರಿವು ಮೂಡಿಸಿದರು.
ಮುಂದಿನ ದಿನಗಳಲ್ಲಿ ಪಿಒಪಿ ಗಣೇಶ ಮೂರ್ತಿಗಳ ತಯಾರಿಕೆ ಹಾಗೂ ಮಾರಾಟ ಮಾಡದಂತೆ ಎಚ್ಚರಿಕೆ ನೀಡಿ ಪರಿಸರ ಸಂರಕ್ಷಣೆ ಹಾಗೂ ಜಲ ಮೂಲಗಳ ಸ್ವಚ್ಛತೆ ಕಾಪಾಡುವ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಬಳಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಯಿತು.
ಪಟ್ಟಣ ಪಂಚಾಯಿತಿಯ ಆರೋಗ್ಯ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.